ತುಮಕೂರು –
ಶಿಕ್ಷಕ-ಶಿಕ್ಷಕಿ ಅಸಭ್ಯವಾಗಿ ವರ್ತಿಸಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸಾಸಲ ಕುಂಟೆ ಗ್ರಾಮದಲ್ಲಿ ನಡೆದಿದೆ.ಹೌದು ಈ ಒಂದು ವಿಚಾರ ವನ್ನು ಗ್ರಾಮಸ್ಥರು ಮೇಲಾಧಿಕಾರಿಗಳಿಗೆ ದೂರು ನೀಡಿ ಆರೋಪವನ್ನು ಮಾಡಿದ್ದಾರೆ.
ಸಾಸಲಕುಂಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದೇವರಾಜ್ ಹಾಗೂ ದೈಹಿಕ ಶಿಕ್ಷಕಿ ಮೇಲೆಯೇ ಈಗ ಗ್ರಾಮಸ್ಥರು ಆರೋಪ ಮಾಡಿದ್ದಾರೆ.ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಶಾಸಕ ವೆಂಕಟರವಣಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಮುಖ್ಯ ಶಿಕ್ಷಕ ದೇವರಾಜ್ ಹಾಗೂ ದೈಹಿಕ ಶಿಕ್ಷಕಿ ಅವರು ಭಾನುವಾರದಂದು ವಿದ್ಯಾರ್ಥಿಗಳಿಗೆ ಸ್ಪೆಷಲ್ ಕ್ಲಾಸ್ ನೆಪವೊಡ್ಡಿ ಶಾಲೆಯಲ್ಲೇ ಮಾಂಸಹಾರ ಅಡುಗೆ ಮಾಡಿ ಮೋಜು ಮಸ್ತಿ ಮಾಡುತ್ತಾರೆ.ಸರಿಯಾಗಿ ಪಾಠ ಪ್ರವಚನ ಮಾಡದೆ ಇಬ್ಬರು ಅಸಭ್ಯವಾಗಿ ವರ್ತಿಸುತ್ತಿರುತ್ತಾರೆ. ಅಲ್ಲದೇ ವಿದ್ಯಾರ್ಥಿಗಳಿಗೆ ಜಾತಿ ನಿಂದನೆ ಮಾಡುತ್ತಾರೆ ಎಂದು ಶಿಕ್ಷಕರ ವಿರುದ್ಧ ಗ್ರಾಮಸ್ಥರು ದೂರು ನೀಡಿದ್ದು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.