ಸಿಡಿ ವಿಚಾರದಲ್ಲಿ ಮತ್ತೊಂದು ಸ್ಪೋಟಕ ವಿಚಾರವನ್ನು ಬಿಚ್ಚಿಟ್ಟ ಯುವತಿಯ ಸಹೋದರರು

Suddi Sante Desk

ಬೆಳಗಾವಿ –

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈಗಾಗಲೇ ಈ ಒಂದು ಪ್ರಕರಣವನ್ನು SIT ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು ದಿನದಿಂದ ದಿನಕ್ಕೆ ಚುರುಕುಗೊಂಡಷ್ಟು ಪ್ರಕರಣ ದಲ್ಲಿ ಸ್ಫೋಟಕ ಮಾಹಿತಿಗಳು ಸತ್ಯಗಳು ಹೊರಬರು ತ್ತಲೇ ಇದೆ. ಇನ್ನೂ ಇದೀಗ ಸಿಡಿಯಲ್ಲಿರುವ ಯುವತಿಯ ಸಹೋದರರು ವಿಚಾರಣೆ ವೇಳೆ ಮತ್ತೊಂದು ಆಘಾತಕಾರಿ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಹೌದು ಯುವತಿಯ ತಂದೆ ತಮ್ಮ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ಎರಡು ದಿನಗಳ ಹಿಂದೆ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಯುವತಿಯ ಮನೆಯವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಯುವತಿಯ ಸಹೋದರರು ತಮ್ಮ ಸಹೋದರಿಗೆ ಹಲವು ರಾಜಕಾರಣಿಗಳ ಸಂಪರ್ಕವಿರುವುದಾಗಿ ತಿಳಿಸಿ ದ್ದಾರೆ. ಸಹೋದರಿಗೆ ಹಲವು ರಾಜಕಾರಣಿಗಳು ನಿರಂತರವಾಗಿ ಕರೆ ಮಾಡುತ್ತಿದ್ದರು. ಈ ಬಗ್ಗೆ ಸ್ವತ: ಸಹೋದರಿ ಹೇಳಿದ್ದಳು ಎಂದು ಮಾಹಿತಿ ನೀಡಿ ದ್ದಾರೆ ಎನ್ನಲಾಗಿದೆ.ಒಂದು ವೇಳೆ ಯುವತಿಗೆ ಹಲವು ರಾಜಕಾರಣಿಗಳು ಕರೆ ಮಾಡುತ್ತಿರುವುದು ನಿಜವೇ ಆಗಿದ್ದರೆ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುವುದರಲ್ಲಿ ಸಂಶಯವಿಲ್ಲ. ಯುವತಿಗೆ ಕರೆ ಮಾಡುತ್ತಿರುವ ರಾಜಕಾರಣಿಗಳು ಯಾರು? ಯಾವ ಕಾರಣಕ್ಕಾಗಿ ಕರೆ ಮಾಡುತ್ತಿದ್ದರು ವಿಚಾರ ಗಳ ಬಗ್ಗೆ ಇದೀಗ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.