ರಾಜ್ಯದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಸಚಿವ ಸಂಪುಟದ ಸ್ಥಾನ ಮಾ‌ನ ನೀಡಿದ ರಾಜ್ಯ ಸರ್ಕಾರ – ಮೊದಲ ಬಾರಿಗೆ ಈ ಒಂದು ಗೌರವ ನೀಡಿ ಆದೇಶ…..

Suddi Sante Desk

ಬೆಂಗಳೂರು

ರಾಜ್ಯದ ಭಾಷೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಕನ್ನಡಾದರತಿ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿ ಕೊಂಡಿರುವ ಕರ್ನಾಟಕ ಸರ್ಕಾರ ಇದೀಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೂ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಿದೆ.ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರಿಗೆ ಸಮನಾದ ಸ್ಥಾನಮಾನ ನೀಡ ಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.ಕನ್ನಡ ಸಾಹಿತ್ಯ ಪರಿಷತ್ ಸದಸ್ಯರೊಬ್ಬರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿರು ವುದು ಇದೇ ಮೊದಲ ಸಲ ಎಂಬುದು ವಿಶೇಷ.

ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಸಾಲುಮರದ ತಿಮ್ಮಕ್ಕ ಅವರಿಗೂ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಿ ಗೌರವಿಸಿತ್ತು.ಇದರ ಬೆನ್ನಲ್ಲೇ ಈಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಸರ್ಕಾರ ರಾಜ್ಯ ಸಚಿವರ ಸ್ಥಾನಮಾನ ನೀಡಿದ್ದು ಸಂತೋಷದ ವಿಚಾರವಾಗಿದ್ದು ಇದು ಪರಿಷತ್‌ ನ ಎಲ್ಲಾ ಸದಸ್ಯರಿಗೂ ಸಂದ ಗೌರವವಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.