ಈಜಲು ಹೋಗಿದ್ದ ಮೂವರು ಸಹೋದರರು ನೀರು ಪಾಲು ಕೆರೆಯಲ್ಲಿ ನಡೆಯಿತು ದುರಂತ…..

Suddi Sante Desk

ಜಗಳೂರು –

ಕೆರೆಯಲ್ಲಿ ಈಜಲು ಹೋಗಿ ಮೂವರು ಸಹೋದರರು ನೀರು ಪಾಲಾದ ಘಟನೆ ಜಗಳೂರಿನಲ್ಲಿ ನಡೆದಿದೆ.ಹೌದು ಇಲ್ಲಿನ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದ ರರು ಸೇರಿ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ತಾಲ್ಲೂಕಿನ ಸಂತೆಮುದ್ದಾಪುರ ಮೂಲದ ವರಾದ ಪಟ್ಟಣದ ನಿವಾಸಿ ಶೇಖಾವತ್ ಅವರ ಪುತ್ರರಾದ ಆಶಿಕ್ (10), ಅಫ್ರಾನ್‌ (8) ಹಾಗೂ ಅಬ್ದುಲ್ ಅವರ ಪುತ್ರ ಸೈಯದ್ ಫೈಜಾನ್ (9) ಮೃತಪಟ್ಟ ಬಾಲಕರಾಗಿ ದ್ದಾರೆ

ರಾತ್ರಿಯಾದರೂ ಬಾಲಕರು ಮನೆಗೆ ಬಾರದಿರುವುದರಿಂದ ಪೋಷಕರು ಹುಡುಕಾಡಿದ್ದಾರೆ ಕೊನೆಗೆ ಸಮೀಪದ ಕೆರೆಯ ಬಳಿ ಹೋಗಿ ನೋಡಿದಾಗ ಬಾಲಕರು ಮುಳುಗಿ ಮೃತಪಟ್ಟಿ ರುವುದು ಗೊತ್ತಾಗಿದೆ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಬಾಲಕರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ.ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.