ಕಾರುಗಳ ನಡುವೆ ಭೀಕರ ಅಪಘಾತ ಸ್ಥಳದಲ್ಲೇ ಮೂವರು ಸಾವು – ಮದುವೆಗೆ ಹೊರಟಿದ್ದ ವರು ಮಸನಕ್ಕೆ…..

Suddi Sante Desk

ರಾಯಚೂರು –

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ರಾಯ ಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕಿನ ಗೊಲ್ಲಪಲ್ಲಿ ಬಳಿ ನಡೆದಿದೆ.ಎರಡು ಕಾರುಗಳ ಮುಖಾಮುಖಿ ಡಿಕ್ಕಿ ಸಂಭ ವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಮರೇಶ್ (30), ಗೋವಿಂದ್ (35) ದೇವರಾಜ್ (34) ಅಪಘಾತದಲ್ಲಿ ಸಾವನ್ನಪ್ಪಿದವರಾಗಿದ್ದಾರೆ.ಎಲ್ಲರೂ ಯಾದಗಿರಿ ಜಿಲ್ಲೆಯ ವಡಗೇರ ಗ್ರಾಮದವರಾಗಿದ್ದು ಇನ್ನೂ ಬೆಂಗಳೂರಿನಿಂದ ಮದುವೆಗೆಂದು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.