ಕೋಲಾರ –
PSI ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳು ಅಮಾನತು – ಮೂವರು ಅಮಾನತು ಮೂವರ ಮೇಲೆ ದಾಖಲಾಯಿತು ದೂರು ತನಿಖೆ ಆರಂಭ ಮಾಡಿದ ಪೊಲೀಸರು ಹೌದು
ಕೋಲಾರ ಲಾಕಪ್ ಡೆತ್ ಪ್ರಕರಣವೊಂದರಲ್ಲಿ ಪಿಎಸ್ಐ ಸೇರಿ ಇಬ್ಬರು ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಲಾಗದ್ದು ಮೂವರ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ಕೋಲಾರ ದಲ್ಲಿ ನಡದಿದೆ.ಕೋಲಾರ ಜಿಲ್ಲೆಯ ಮುಳಬಾ ಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊ ಬ್ಬರು ಅಕ್ಟೋಬರ್ 1ರಂದು ಸಾವನ್ನಪ್ಪಿದ್ದರು
ಪ್ರಕರಣದಲ್ಲಿ ಠಾಣೆಯ ಪಿಎಸ್ಐ ಪ್ರದೀಪ್ ಸಿಂಗ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮಂಜುನಾಥ್, ಮಹಾಂತೇಶ್ ಪೂಜಾರಿ ಎಂಬುವರನ್ನು ಅಮಾನತು ಮಾಡಲಾಗಿದೆ. ಕಳ್ಳತನ ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಮುನಿರಾಜು ಮತ್ತು ಬಾಲಾಜಿ ಎಂಬ ಯುವಕರನ್ನು ವಿಚಾರಣೆಗೆಂದು ಸೆಪ್ಟೆಂಬರ್ 17ರಂದು ಠಾಣೆಗೆ ಕರೆತಂದಿದ್ದರು
ಅವರನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತರದೇ ಬೇರೆ ಬೇರೆ ಸ್ಥಳಗಳಲ್ಲಿ ಇರಿಸಿ 15 ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದ ರು ಆದರೆ ಅಕ್ಟೋಬರ್ 1ರಂದು ಪೊಲೀಸ್ ರ ವ್ಯಾಪ್ತಿಯಲ್ಲಿಯೇ ಮುನಿರಾಜು ಎಂಬುವರು ಸಾವನ್ನಪ್ಪಿದ್ದರು.ನಂತರ ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿತ್ತು ಇಲಾಖೆ ಹಿರಿಯ ಅಧಿಕಾರಿ ಗಳ ಗಮನಕ್ಕೆ ತಾರದೇ ಆರೋಪಿಗಳನ್ನು ವಿಚಾರಣೆ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆ
ಎಂಬ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಿ ಕೋಲಾರ ಎಸ್ಪಿ ನಾರಾಯಣ ಅವರು ಅಮಾನತು ಮಾಡಿದ್ದಾರೆ ಅಲ್ಲದೇ ಮೂವರ ವಿರುದ್ಧವೂ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಯನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಕೋಲಾರ…..