ಸಾರಿಗೆ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ – ಕಚೇರಿಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ನೌಕರ

Suddi Sante Desk

ಕಲಬುರಗಿ –

NEKRTC ಕೇಂದ್ರ ಕಚೇರಿಯಲ್ಲೇ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೌದು ಗುಲಬುರ್ಗಾ ಸಾರಿಗೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಕೇಂದ್ರ ಕಚೇರಿಯ ಲೆಕ್ಕಪರಿಶೋಧನಾ ಕೊಠಡಿಯಲ್ಲಿ ಸಿಬ್ಬಂದಿ ಶವ ಪತ್ತೆಯಾಗಿದೆ. ನಾಗರಾಜ್ ಲೋಕಪಲ್ಲಿ ಎಂಬುವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಾಗರಾಜ್ ಸೆಕ್ಯೂರಿಟಿ ಕಾನಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.

ಕಲಬುರಗಿ ಜಿಲ್ಲೆ ಅಫಜಲಪುರ ಪಟ್ಟಣದ ನಿವಾಸಿಯಾಗಿರುವ ಇವರ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ನಿನ್ನೆ ನೈಟ್ ಶಿಪ್ಟ್ ಕೆಲಸದ ಮೇಲಿದ್ದರು. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.