ಧಾರವಾಡದಲ್ಲಿ ಕೆರೆಯಲ್ಲಿ ಮುಳುಗಿ ಇಬ್ಬರು ಸಹೋದರರು ಸಾವು – ಕೆರೆಯಲ್ಲಿ ಬಿದ್ದ ಅಣ್ಣನನ್ನು ಉಳಿಸಲು ಹೋಗಿ ನೀರಿನಲ್ಲಿ ಮುಳುಗಿದ ತಮ್ಮ…..

Suddi Sante Desk

ಧಾರವಾಡ –

ಕೆರೆಯಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಧಾರುಣ ಘಟನೆ ಧಾರವಾಡದ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಕೆರೆಯಲ್ಲಿ ಸ್ನಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಒಂದು ಘಟನೆ ನಡೆದಿದೆ.ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಸಹೋದರರು ಮೃತರಾಗಿದ್ದಾರೆ.

ಕಾಶೀಮ ನಧಾಪ(24) ಹಾಗೂ ಶರೀಫ ನದಾಫ (20) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಸ್ನಾನ ಮಾಡಲು ಹೋಗಿದ್ದರು ಇಬ್ಬರು.

ಗ್ರಾಮದ ಕೆರೆಯಲ್ಲಿ ಕಾಶೀಂ ಸ್ನಾನ ಮಾಡುವಾಗ ಕೆರೆಯಲ್ಲಿ ಇಳಿದಿದ್ದಾರೆ ಈ ಒಂದು ಸಮಯದಲ್ಲಿ ಮುಳುಗುವಾಗ ಆತನನ್ನ ಉಳಿಸಲು ಹೋದ ಶರೀಫ ಕೂಡಾ ಮುಳುಗಿ ಸಾವನ್ನಪ್ಪಿದ್ದಾರೆ.ಈ ವೇಳೆ ಇಬ್ಬರೂ ಮುಳುಗಿ ಸಾವಿಗೀಡಾಗಿದ್ದಾರೆ.

ಇನ್ನೂ ಸುದ್ದಿ ತಿಳಿದ ಗರಗ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಕುರಿತಂತೆ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.