ಭೀಕರ ರಸ್ತೆ ಅಪಘಾತ ಇಬ್ಬರು ಸರ್ಕಾರಿ ನೌಕರರು ಸ್ಥಳದಲ್ಲೇ ಸಾವು – ಸಚಿವರ ಕಾರ್ಯಕ್ರಮಕ್ಕೆ ಹೋಗಿ ಮರಳಿ ಮನೆಗೆ ಹೊರಟಿದ್ದ ಇಬ್ಬರು ನೌಕರರು..‌…

Suddi Sante Desk

ಶಿಡ್ಲಘಟ್ಟ –

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ಮರಳು ತ್ತಿದ್ದ ಚಿಂತಾಮಣಿ ತಾಲೂಕಿನ ಸಹಾಯಕ ಕೃಷಿ ಅಧಿಕಾರಿ ಮತ್ತು ಸಿಬ್ಬಂದಿಯೊಬ್ಬರು ರಸ್ತೆ ಅಪಘಾತ ದಲ್ಲಿ ಮೃತಪಟ್ಟಿ ರುವ ದಾರುಣ ಘಟನೆ ತಾಲೂಕಿನ ಪಿಂಡ ಪಾಪನಹಳ್ಳಿ ಗೇಟ್ ಬಳಿ ಸಂಭವಿಸಿದೆ.ಚಿಂತಾಮಣಿ ತಾಲೂಕಿನ ಸಹಾ ಯಕ ಕೃಷಿ ಅಧಿಕಾರಿ ವಿನಯ್ ಹಾಗೂ ಸಿಬ್ಬಂದಿ ಲೋಕೇಶ್ ಮೃತಪಟ್ಟಿದ್ದಾರೆ ಇವರಿಬ್ಬರು ಚಿಕ್ಕಬಳ್ಳಾಪುರ ತಾಲೂಕಿನ ಎಸ್.ಗೊಲ್ಲಹಳ್ಳಿಯಲ್ಲಿ ಆಯೋಜಿಸಿದ್ದ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಡ್ಲಘಟ್ಟ ಮಾರ್ಗದ ಮೂಲಕ ಚಿಂತಾಮಣಿ ತಾಲೂಕಿಗೆ ಮರಳುತ್ತಿದ್ದ ವೇಳೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ ಇದರಿಂದ ಇಬ್ಬರು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಇನ್ನೂ ಸುದ್ದಿ ತಿಳಿದ ಕೂಡಲೇ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಸತೀಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಸಹಾಯಕ ಕೃಷಿ ಅಧಿಕಾರಿ ಮತ್ತು ಸಿಬ್ಬಂದಿಯ ಮೃತದೇಹಗಳನ್ನು ಶಿಡ್ಲ ಘಟ್ಟ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ.ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾ ಕರ್ ಅವರು ಭಾಗವಹಿಸಿದ ಕಾರ್ಯಕ್ರಮದಲ್ಲಿ ಭಾಗವಹಿ ಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.