ಕಾರು ಲಾರಿ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು – ಧಾರವಾಡದ ನಿವಾಸಿಗಳು ಮೃತರು……

Suddi Sante Desk

ಗದಗ

ಕಾರ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ಸಾವಿಗೀಡಾದ ಘಟನೆ ಗದಗ ಹೊರವಲ ಯದಲ್ಲಿ ನಡೆದಿದೆ‌. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜನಿಯರಿಂಗ್ ಕಾಲೇಜ್ ಬಳಿ ಈ ಒಂದು ಅಪಘಾತದ ಘಟನೆ ನಡೆದಿದೆ.

ಕಾರ್ ಚಾಲಕ ಅನ್ವರ್ ಹಾಗೂ ಪ್ರೇಮ ಈಶ್ವರಗೌಡ ಪಾಟೀಲ್(೫೫) ಮೃತ ದುರ್ದೈವಿಗಳಾಗಿದ್ದಾರೆ‌. ಈಶ್ವರಗೌಡ ರುದ್ರಗೌಡ ಪಾಟೀಲ್, ಶಿವಾಬಾಯಿ ಮೇಲಗಿರಿಗೌಡ ಪಾಟೀಲ್, ಮಹಾರಾಜಗೌಡ ಮೇಲಗಿರಿಗೌಡ ಪಾಟೀಲ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ.ಮೂಲತಃ ಗದಗ ಜಿಲ್ಲೆ ರೋಣ ತಾಲೂಕಿನ ಮಾಳವಾಡ ಗ್ರಾಮದವ ರಾಗಿದ್ದು ಸಧ್ಯ ಧಾರವಾಡದಲ್ಲಿ ನೆಲೆಸಿದ್ದಾರೆ.

ಪ್ರಸ್ತುತ ಧಾರವಾಡದಲ್ಲಿ ನೆಲೆಸಿದ್ದರು. ಮಾಳವಾಡ ಗ್ರಾಮದ ತಮ್ಮ ಹೊಲಕ್ಕೆ ಭೇಟಿ ನೀಡಿ ವಾಪಾಸ್ ತೆರಳುವಾಗ ಈ ಒಂದು ಘಟನೆ ನಡೆದಿದೆ.ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.