This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ವಿಜಯಪುರ

ಮುಖ್ಯಶಿಕ್ಷಕ ಸೇರಿದಂತೆ ಇಬ್ಬರು ಶಿಕ್ಷಕರು ಅಮಾನತು – ಶಿಕ್ಷಕರನ್ನು ಅಮಾನತು ಮಾಡಿದ ಜಿಲ್ಲಾಧಿಕಾರಿ

WhatsApp Group Join Now
Telegram Group Join Now

ವಿಜಯಪುರ

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ಹೌದು ಚುನಾವಣೆ ಹಿನ್ನೆಲೆಯಲ್ಲಿ ಚೆಕ್ಪೋ ಸ್ಟ್ ಗೆ ಕರ್ತವ್ಯಕ್ಕೆ ಹಾಜ ರಾಗದೇ ಕರ್ತವ್ಯ ಲೋಪ ಎಸಗಿರುವ ಆರೋಪ ದಲ್ಲಿ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಜಿಲ್ಲಾಧಿಕಾರಿ ಯೂ ಆಗಿರುವ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ವಿ.ಬಿ.ದಾನಮ್ಮನವರ ಅಮಾನತು ಮಾಡಿದ್ದಾರೆ.

ಚುನಾವಣೆಯ ಕರ್ತವ್ಯದ ಭಾಗವಾಗಿ ಚೆಕ್‌ ಫೊಸ್ಟ್ ಕರ್ತವ್ಯಕ್ಕೆ ನಿಯೋಜಿಸಿದ್ದ ಬರಟಗಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯ ಅಣ್ಣಪ್ಪ ಸೌದಿ ಹಾಗೂ ಕಳ್ಳಕವಟಗಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಅಲ್ಲಾಭಕ್ಷ ಇವರು ಕರ್ತವ್ಯಕ್ಕೆ ಹಾಜರಾಗದೇ ಅನಧಿಕೃತ ಗೈರಾಗಿ ದ್ದಾರೆ.

ಮಾ.23 ರಂದು ಅಣ್ಣಪ್ಪ ಅವರು ಅರ್ಜುಣಗಿ ಚಕ್ ಪೋಸ್ಟ್  ಅಲ್ಲಾಭಕ್ಷ ಚಿಕ್ಕಗಲಗಲಿ ಚಕ್ ಪೋಸ್ಟ್ ಕರ್ತವ್ಯಕ್ಕೂ ಹಾಜರಾಗಬೇಕಿತ್ತು. ಇವರಿಗಿಂತ ಮೊದಲ ಪಾಳೆಯಲ್ಲಿ ಕರ್ತವ್ಯ ನಿರ್ವಹಿಸಿದ ಚಕ್ ಪೋಸ್ಟ್ ಸಿಬ್ಬಂದಿ, ಮುಖ್ಯ ಸ್ಥರು ಮುಂದಿನ ಕರ್ತವ್ಯಕ್ಕೆ ಹಾಜರಾಗುವಂತೆ ಕರೆ ಮಾಡಿದ್ದರು.ಆದರೆ ಈ ಇಬ್ಬರೂ ಕರೆ ಸ್ವೀಕರಿಸಿಲ್ಲ,

ಕರ್ತವ್ಯಕ್ಕೂ ಹಾಜರಾಗಿಲ್ಲ.ಚುನಾವಣಾ ಕರ್ತವ್ಯ ದಂಥ ಮಹತ್ವದ ಕರ್ತವ್ಯ ನಿರ್ವಹಣೆಯಲ್ಲಿ ಈ ಇಬ್ಬರೂ ಕರ್ತವ್ಯ ಲೋಪ ಎಸಗಿದ್ದರಿಂದ ಇಬ್ಬರಿಗೂ ಮಾ.28 ರಂದು ಕಾರಣ ಕೇಳಿ ನೋಟೀಸ್ ನೀಡಲಾಗಿತ್ತು.ಆದರೆ ಈ ಇಬ್ಬರೂ ನೋಟೀಸ್ ಗೆ ಉತ್ತರಿಸದ ಕಾರಣ, ಇಬ್ಬರನ್ನೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ವಿ.ಬಿ.ದಾನಮ್ಮನವರ ಮಾ.31 ರಂದು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ.

ಇಲಾಖೆ ವಿಚಾರಣೆ ಬಾಕಿ ಇರುವ ಕಾರಣ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡದಂತೆಯೂ ಸಸ್ಪೆಂಡ್ ಆಗಿರುವ ಶಿಕ್ಷಕರಿಗೆ ಸಸ್ಪೆಂಡ್ ಆದೇಶದಲ್ಲಿ ತಾಕೀತು ಮಾಡಲಾಗಿದ್ದು ಮುಂದಿನ ಕ್ರಮವನ್ನು ಕೈಗೊಳ್ಳಲಾಗುತ್ತಿದೆ.

ಸುದ್ದಿ ಸಂತೆ ನ್ಯೂಸ್ ವಿಜಯಪುರ…..


Google News

 

 

WhatsApp Group Join Now
Telegram Group Join Now
Suddi Sante Desk