This is the title of the web page
This is the title of the web page

Live Stream

[ytplayer id=’1198′]

May 2025
T F S S M T W
1234567
891011121314
15161718192021
22232425262728
293031  

| Latest Version 8.0.1 |

State News

ಆ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಬಿಡುಗಡೆಗೆ ಒತ್ತಾಯ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಗೆ ಮನವಿ ಒತ್ತಾಯ…..ಸ್ವಾಗತಿಸಿದರು ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದವರು…..

WhatsApp Group Join Now
Telegram Group Join Now

ಬೆಂಗಳೂರು –

ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರಿಗೂ ರಾಜ್ಯದ ಶಿಕ್ಷಣ ಸಚಿವರು ವಿಧಾನ ಪರಿಷತ್ ಸರ್ವ ಸದಸ್ಯರು ಧ್ವನಿ ಎತ್ತಿದ್ದಾರೆ. ಹೌದು ಶಿಕ್ಷಕರು ಶಿಕ್ಷಕೇ ತರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿ ದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಸಚಿವ ಸುರೇಶ್ ಕುಮಾರ್‌ ನೇತ್ರತ್ವದಲ್ಲಿ ಮುಖ್ಯಮಂತ್ರಿಗಳನ್ನು ಮನವಿ ಮಾಡಿದ್ದಾರೆ.

ಶಿಕ್ಷಕರ ಪದವೀಧರ ಕ್ಷೇತ್ರಗಳ‌ ಶಾಸಕರ ನಿಯೋಗ ದೊಂದಿಗೆ ಇಂದು ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಚಿವರು ಈ ಸಮುದಾಯದ ಸ್ಥಿತಿ ಶೋಚನೀಯವಾಗಿದ್ದು ದೈನಂದಿನ ಜೀವನ ನಿರ್ವ ಹಣೆಯೂ ದುಸ್ತರವಾಗಿದೆ. ಜೀವನ ನಡೆಸಲು ಈ ಸಮುದಾಯದ ಹಲವಾರು‌ ಜನ ಹಣ್ಣು ತರಕಾರಿ ಮಾರುತ್ತಿದ್ದಾರೆ ಕೂಲಿ ಕೆಲಸ‌ ಮಾಡಿದ್ದಾರೆ. ನಮ್ಮ ಮಕ್ಕಳ ಹಿತ ಕಾಯುವ ಸಮುದಾಯವನ್ನು ನಾವು ಘನತೆಯಿಂದ ನಡೆಸಿಕೊಳ್ಳುವುದು ಕರ್ತವ್ಯವಾಗಿ ದ್ದು ಸರ್ಕಾರದ ಆರ್ಥಿಕ ಪ್ಯಾಕೇಜ್ ಈ ಸಮುದಾ ಯಕ್ಕೆ ಆತ್ಮ ವಿಶ್ವಾಸ ತುಂಬಲು ಸಹಕಾರಿಯಾಗಲಿದೆ ಎಂದರು.ಸಚಿವರೊಂದಿಗೆ ವಿಧಾನ ಪರಿಷತ್ತಿನ ಸದ ಸ್ಯರಾದ ಡಾ.ವೈ.ಎ.ನಾರಾಯಣ ಸ್ವಾಮಿ, ಪುಟ್ಟಣ್ಣ, ಅರುಣ ಶಹಾಪುರ, ಶಶೀಲ್ ನಮೋಶಿ, ಎಸ್ ವಿ ಸಂಕನೂರ,ಹನುಮಂತ ನಿರಾಣಿ, ಹಾಗೂ ಚಿದಾನಂ ದ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇನ್ನೂ ಆ ಶಿಕ್ಷಕರ ಪರ ಧ್ವನಿ ಎತ್ತಿದ ಈ ಒಂದು ನಿರ್ಧಾರವನ್ನು ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದ ಅಧ್ಯಕ್ಷ ಅಶೋಕ ಸಜ್ಜನ ನೇತೃತ್ವ ದಲ್ಲಿನ ಸಂಘ ವಿಧಾನ ಪರಿಷತ್ ಸರ್ವ ಸದಸ್ಯರನ್ನು ಶಿಕ್ಷಣ ಸಚಿವರಿಗೆ ಅಭಿವಂದಿಸಿದ್ದಾರೆ ಕೂಡಲೇ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಆಗ್ರಹಿಸಿದರು


Google News

 

 

WhatsApp Group Join Now
Telegram Group Join Now
Suddi Sante Desk