IIT ಕಟ್ಟಡ ಕಾಮಗಾರಿ ಪರಿಶೀಲನೆ ಮಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ವೀಕ್ಷಣೆ ಮಾಡಿ ಅಧಿಕಾರಿಗಳ ಜೊತೆ ಸಭೆ ಸಚಿವರಿಗೆ ಸಾಥ್ ನೀಡಿದ ಶಾಸಕರಾದ ಅರವಿಂದ ಬೆಲ್ಲದ,ಅರವಿಂದ ಬೆಲ್ಲದ…..

Suddi Sante Desk

ಧಾರವಾಡ –

ಧಾರವಾಡದ ಹೊರವಲಯದ ಮಮ್ಮಿಗಟ್ಟಿ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ನಿರ್ಮಾಣ ವಾಗುತ್ತಿರುವ ಐಐಟಿ ಕಟ್ಟಡ ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪರಿಶೀಲನೆ ಮಾಡಿದರು.

ಹೌದು ಕೆಲಗೇರಿ ಗ್ರಾಮದ 470 ಎಕರೆ ಪ್ರದೇಶದಲ್ಲಿ ನಿರ್ಮಾಣ ವಾಗುತ್ತಿರುವ ಐಐಟಿ ಕಟ್ಟಡದ ಕಾಮಗಾರಿ ಯನ್ನು ವೀಕ್ಷಣೆ ಮಾಡಿದ ಸಚಿವರು ನಂತರ ಐಐಟಿ ಅಧಿಕಾರಿಗಳೊಂದಿಗೆ ಸಭೆ ಮಾಡಿದರು ಕೆಲವೊಂದಿಷ್ಟು ಮಾಹಿತಿಯನ್ನು ಪಡೆದುಕೊಂಡು ಕಾಮಗಾರಿಯ ಪ್ರಗತಿ ಯ ಬಗ್ಗೆ ಚರ್ಚಿಸಿದರು.

ಇದೇ ವೇಳೆ ತೀವ್ರವಾಗಿ ಕಟ್ಟಡದ ಕಾಮಗಾರಿಯನ್ನು ಕೂಡಲೇ ತ್ವರಿತವಾಗಿ ಮುಗಿಸುವಂತೆ ಸೂಚಿಸಿದರು.ಈ ಒಂದು ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದು ಕೇಂದ್ರ ಸಚಿವರಿಗೆ ಸಾಥ್ ನೀಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.