ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಪ್ರಧಾನಿ ನರೇಂದ್ರ ಮೋದಿ – ಸ್ವಾಗತ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಾಸಕ MR ಪಾಟೀಲ್,ಅರವಿಂದ ಬೆಲ್ಲದ್,ಮಹೇಶ್ ತೆಂಗಿನಕಾಯಿ…..

Suddi Sante Desk
ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಪ್ರಧಾನಿ ನರೇಂದ್ರ ಮೋದಿ – ಸ್ವಾಗತ ಮಾಡಿ ಅಭಿನಂದನೆಗಳನ್ನು ಸಲ್ಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಾಸಕ MR ಪಾಟೀಲ್,ಅರವಿಂದ ಬೆಲ್ಲದ್,ಮಹೇಶ್ ತೆಂಗಿನಕಾಯಿ…..

ನವದೆಹಲಿ

ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಬಿಗ್ ರಿಲೀಪ್ ನೀಡಿದ್ದಾರೆ ಹೌದು ಕಳೆದ ಕೆಲ ದಿನಗಳಿಂದ ಅಡುಗೆ ಅನಿಲ ಬೆಲೆಯಿಂದ ಬೇಸತ್ತಿದ್ದ ಜನತೆಗೆ ನೆಮ್ಮದಿ ಯ ಸುದ್ದಿ ಯನ್ನು ನೀಡಿದ್ದಾರೆ ಇದರೊ‌ಂದಿಗೆ ಬೆಲೆ ಏರಿಕೆ ಯಲ್ಲಿ ಭಾರೀ ಇಳಿಕೆಯನ್ನು ಮಾಡಿದ್ದಾರೆ.

ಹಣದುಬ್ಬರದಿಂದ ಕಂಗೆಟ್ಟಿರುವ ಜನರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದ್ದು ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ 200 ರೂ.ವರೆಗೆ ಕಡಿತಗೊಳಿಸಿದೆ.ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಮೇಲೆ 200 ರೂ.ಗಳ ಸಹಾಯಧನವನ್ನ ಸರ್ಕಾರ ಘೋಷಿಸಿದೆ

ಉಜ್ವಲ ಯೋಜನೆಯಡಿ ಬರುವ ಫಲಾನುಭವಿ ಗಳಿಗೆ ಈ ಸಹಾಯಧನವನ್ನ ನೀಡಲಾಗುವುದು. ಆಗಸ್ಟ್ ಒಂದರಂದು ಪೆಟ್ರೋಲಿಯಂ ಕಂಪನಿ ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಯನ್ನು 100 ರೂಪಾಯಿ ಕಡಿತಗೊಳಿಸಿದ್ದವು. ಆದ್ರೆ, ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಅಂದ ಹಾಗೆ, ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಎಲ್‌ಪಿಜಿ ಬೆಲೆಯನ್ನ ಬದಲಾಯಿಸುತ್ತವೆ.ಸಂಪುಟ ಸಭೆ ಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.ಸರ್ಕಾರದ ಪ್ರಕಾರ, ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಿಲಿಂಡರ್ ಬೆಲೆ 200 ರೂಪಾಯಿಗಳಷ್ಟು ಅಗ್ಗವಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊ ಳ್ಳಲಾಗಿದೆ.ಉಜ್ವಲ ಯೋಜನೆಯ ಫಲಾನುಭವಿ ಗಳಿಗೆ ಮಾತ್ರ ಅಡುಗೆ ಅನಿಲದ ಸಬ್ಸಿಡಿಯ ಲಾಭ ಸಿಗಲಿದೆ ಎಂದು ಕೇಂದ್ರ ಸರ್ಕಾರ ಕಳೆದ ವರ್ಷವೇ ಸ್ಪಷ್ಟಪಡಿಸಿತ್ತು.

ಅಡುಗೆ ಅನಿಲ ಸಿಲಿಂಡರ್ ಮೇಲೆ ಬೇರೆ ಯಾರಿಗೂ ಸಬ್ಸಿಡಿ ನೀಡುವುದಿಲ್ಲ ಉಜ್ವಲ ಯೋಜನೆಯಡಿ ಸರ್ಕಾರ ಈಗಾಗಲೇ 200 ರೂಪಾಯಿ ಸಬ್ಸಿಡಿ ನೀಡುತ್ತಿದ್ದು ಈಗ ಹೆಚ್ಚುವರಿ ಯಾಗಿ 200 ರೂಪಾಯಿ ನೀಡುತ್ತಿದೆ.

ಇನ್ನೂ ಈ ಒಂದು ನಿರ್ಧಾರ ವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರಾದ ಎಮ್ ಆರ್ ಪಾಟೀಲ್, ಮಹೇಶ್ ತೆಂಗಿನಕಾಯಿ, ಅರವಿಂದ ಬೆಲ್ಲದ ಸೇರಿದಂತೆ ಹಲವರು ಸ್ವಾಗತಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ನವದೆಹಲಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.