ಸಂಗೀತ ಮಾಂತ್ರಿಕ ನನ್ನು ರಾಜ್ಯ ಸಭೆಗೆ ಆಹ್ವಾನಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ಕುಶಲೋಪರಿ ವಿಚಾರಿಸಿ ಧನ್ಯತಾಭಾವ ವ್ಯಕ್ತಪಡಿಸಿದ ಕೇಂದ್ರ ಸಚಿವರು…..

Suddi Sante Desk

ನವದೆಹಲಿ

ರಾಜ್ಯಸಭೆಗೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ವಾಗತಿಸಿ ಬರಮಾಡಿಕೊಂಡರು ನಂತರ ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ ಭೇಟಿ ಯಾದ ಇಳಯರಾಜ ಅವರು ಮಾತುಕತೆ ನಡೆಸಿದರು.ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅತ್ಯಂತ ಗೌರವಯುತವಾಗಿ ಇಳಯರಾಜ ಅವರನ್ನು ಬರಮಾಡಿ ಕೊಂಡು ಸನ್ಮಾನಿಸಿ ಅಭಿನಂದಿಸಿದರು.

ನಂತರ ಇಳಯರಾಜ ಅವರನ್ನು ಕುರಿತು ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟು ಮಾಡಿದೆ ಎಂದು ಭೇಟಿ ವೇಳೆ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ.ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.ದಕ್ಷಿಣ ಭಾರತದಿಂದ ರಾಜ್ಯಸಭೆಗೆ ಒಟ್ಟು 4 ಮಂದಿ ಆಯ್ಕೆಯಾಗಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.