ಕಲಬುರ್ಗಿ –
ಪ್ರಧಾನಿ ಮೋದಿಯನ್ನು ನಾಲಾಯಕ್ ಎಂದು ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೀಯಾಂಕ್ ಖರ್ಗೆ ಹೇಳಿದರು.ಕಲಬುರಗಿ ಯಲ್ಲಿ ಮಾತನಾಡಿದ ಅವರು ಅಪ್ಪ ವಿಷ ಸರ್ಪ ಅಂದ್ರೆ ಮಗ ನಾಲಾಯಕ್ ಎಂದು ಮೋದಿಗೆ ಮೂದಲಿಕೆಯನ್ನು ಮಾಡಿ ಮಾತನಾಡಿದರು
ಮೋದಿ ಮಳಖೇಡಕ್ಕೆ ಬಂದಾಗ ಬಂಜಾರಾ ಸಮಾಜದವರಿಗೆ ಏನು ಹೇಳಿದ್ರು.ಬಂಜಾರಾ ಸಮಾಜದ ಜನರ ಮಗ ದೆಹಲಿಯಲ್ಲಿದ್ದಾನೆ ಅಂತ ಮೋದಿ ಹೇಳಿದ್ದರು ಆದ್ರೆ ಇಂತಹ ನಾಲಾಯಕ್ ಮಗನಿದ್ರೆ ಹೇಗೆ ನಡೆಯುತ್ತೆ ಎಂದರು
ದೇಶ ನಡೆಸೋನು ಮಾತ್ರವಲ್ಲ.. ಮನೆಲಿ ಒಬ್ಬ ನಾಲಾಯಕ್ ಮಗನಿದ್ರೂ ಮನೆ ಸುಸೂತ್ರವಾಗಿ ನಡೆಯೋದಿಲ್ಲಆದ್ರೆ ಸುದ್ದಿಗೋಷ್ಠಿಯ ಕೊನೆಗೆ ನಾನು ಮೋದಿಗೆ ಹಾಗೆ ಅಂದಿಲ್ಲ ಎಂದು ಹೇಳಿ ಏನೇನು ಸಮರ್ಥನೆ ಮಾಡಿಕೊಳ್ಳಲು ಮುಂದಾದರು
ನನಗೆ ವಯಕ್ತಿಕ ನಿಂದನೆಗಿಂತ ಅವರಿಂದ ಕೆಲವು ಪ್ರಶ್ನೆಗೆ ಉತ್ತರ ಮುಖ್ಯ ಎಂದು ಸಮಜಾಯಿಸಿ ನೀಡಲು ಯತ್ನಿಸಿದರು ಪ್ರೀಯಾಂಕ್ ಖರ್ಗೆ ಒಟ್ಟಾರೆ ಏನೇ ಆಗಲಿ ದೇಶದ ಪ್ರಧಾನ ಮಂತ್ರಿ ಬಗ್ಗೆ ಹಗುರವಾಗಿ ಮಾತನಾಡಿದ ಖರ್ಗೆ ಅವರ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾ ಗುತ್ತಿದ್ದು ಇನ್ನೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಒಂದು ಹೇಳಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಈ ಒಂದು ಕೂಡಲೇ ಕ್ಷಮೆ ಕೇಳುವಂತೆ ಒತ್ತಾಯ ಮಾಡಿದರು.
ಸುದ್ದಿ ಸಂತೆ ನ್ಯೂಸ್ ಕಲಬುರಗಿ…..