This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರ ಸಮುದಾಯಕ್ಕೆ ಬಹು ಮುಖ್ಯ‌ ಮಾಹಿತಿ…..

WhatsApp Group Join Now
Telegram Group Join Now

ಬೆಂಗಳೂರು –

ಹೊಸ ಶಿಕ್ಷಕರ ವರ್ಗಾವಣೆ ಕಾಯಿದೆಯನ್ವಯ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಗೊಳ್ಳುವ ಹಂತದಲ್ಲಿ ಕೆಲವು ಶಿಕ್ಷಕರು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ ಕಾರಣ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಶಿಕ್ಷಕರ ವರ್ಗಾವಣೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದ ನಂತ್ರ ಶೀಘ್ರವೇ ಕೌನ್ಸಿಲಿಂಗ್ ಪ್ರಕ್ರಿಯೆ ಪ್ರಾರಂಭಿಸುವ ಭರವಸೆಯನ್ನು ಸಿಎಂ ಹಾಗೂ ಶಿಕ್ಷಣ ಸಚಿವರು ನೀಡಿದ್ದಾರೆ.

ಈ ಕುರಿತಂತೆ ಕರ್ನಾಟ ರಾಜ್ಯ ಸರ್ಕಾರಿ ನೌಕರರ ಸಂಘವು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಭೇಟಿ ಮಾಡಿ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್ ಆರಂಭಿಸುವಂತೆ ಮನವಿ ಮಾಡಿತ್ತು ಹೀಗಾಗಿ ಶೀಘ್ರದಲ್ಲೇ ಈ ಒಂದು ವರ್ಗಾವಣೆಗೆ ಚಾಲನೆ ಸಿಗಲಿದೆ

ಇಂತಹ ಮನವಿಗೆ ಪ್ರತಿಸ್ಪಂದಿಸಿರುವಂತ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ಮುಂದಿನ ಸಚಿವ ಸಂಪುಟದಲ್ಲಿ ವರ್ಗಾವಣೆಗೆ ಸಂಬಂಧಿಸಿದ ಪ್ರಸ್ತಾವನೆಗೆ ಅನುಮೋದನೆ ಪಡೆದು, ಶೀಘ್ರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಪ್ರಾರಂಭಿಸುವ ಭರವಸೆ ನೀಡಿದ್ದಾರೆ.

ಆದ್ದರಿಂದ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ವರ್ಗಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಆತಂಕ, ಗೊಂದಲಕ್ಕೆ ಒಳಗಾಗ ಬಾರದು ಎಂಬುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಶಿಕ್ಷಕರಲ್ಲಿ ಮನವಿ ಮಾಡಿದೆ.


Google News

 

 

WhatsApp Group Join Now
Telegram Group Join Now
Suddi Sante Desk