ಬೆಂಗಳೂರು –
ಕನ್ನಡ ಚಿತ್ರರಂಗದ ಹಿರಿಯ ನಟಿ ಬಹುಭಾಷಾ ತಾರೆ ಜಯಂತಿ ಅವರು ನಿಧನರಾಗಿದ್ದಾರೆ.ಹೌದು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲು ತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ (76) ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಅಭಿಯನ ಶಾರದೆ ಜಯಂತಿ ಅವರು ಒಟ್ಟು ಆರು ಭಾಷೆಗಳಲ್ಲಿ 190 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ದ್ದಾರೆ. ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. 1968 ರಲ್ಲಿ ತೆರೆ ಕಂಡ ವೈ,ಅರ್,ಸ್ವಾಮಿ ನಿರ್ದೇಶ ನದ ‘ಜೇನು ಗೂಡು’ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು’ ಕಮಲ ಕುಮಾರಿ.ಅದಕ್ಕಿಂತ ಮುನ್ನ ‘ಜಗದೇಕ ವೀರನ ಕಥೆ ‘ಚಿತ್ರದಲ್ಲಿ ಸಣ್ಣ ಪಾತ್ರ ವೊಂದರಲ್ಲಿ ಅಭಿನಯಿಸಿದ್ದಾರೆ.ಒಟ್ಟು ಆರು ಭಾಷೆಯ ಚಿತ್ರಗಳ ಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ನಿರ್ಮಾಪಕಿಯೂ ನಿರ್ದೇಶಕಿಯೂ ಆಗಿರುವ ಇವರು 1965 ‘ಮಿಸ್ ಲೀಲಾವತಿ’ ಚಿತ್ರದ ಅಭಿನ ಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.’ಎರಡು ಮುಖ’. (1969),ಮನಸ್ಸಿನಂತೆ ಮಾಂಗಲ್ಯ'(1976),’ಧರ್ಮ ದಾರಿ ತಪ್ಪಿತು'(1981),ಮಸಣದ ಹೂವು (1985), ‘ಆನಂದ್ ‘(1989) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.