ಹಿರಿಯ ಚಿತ್ರನಟ ಸತ್ಯಜಿತ್ ನಿಧನ ಅನಾಥವಾಗಿಯಿತು ಕನ್ನಡ ಚಿತ್ರರಂಗ…..

Suddi Sante Desk

ಬೆಂಗಳೂರು –

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72) ನಿನ್ನೆ ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.ಕಳೆದ ಹಲವು ದಿನಗಳಿಂದ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಾ ಗಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನರಾದರು.ಸತ್ಯಜಿತ್ ಪೊಲೀಸ್ ಲಾಕ್ ಅಪ್,ನಮ್ಮೂರ ಹಮ್ಮೀರ ಸೇರಿ 600 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದಾರೆ.ಮೃತದೇಹವನ್ನು ಈಗ ಹೆಗಡೆನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾ ಗಿದ್ದು ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಇನ್ನೂ ಪ್ರಮುಖವಾಗಿ ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಅನೇಕ ಊರುಗಳಿಗೆ ತೆರಳಿ ನಾಟಕಗಳನ್ನು ಪ್ರದರ್ಶಿಸುತ್ತಿ ದ್ದರು. ಇದೇ ಮುಂದೆ ಅವರ ಬಣ್ಣದ ಬದುಕಿಗೆ ದಾರಿಮಾ ಡಿಕೊಟ್ಟಿತು.ಸತ್ಯಜಿತ್ ಅವರ ನಿಜವಾದ ಹೆಸರು ಸಯ್ಯದ್ ನಿಜಾಮುದ್ದೀನ್ ಸಯ್ಯದ್ ನಿಜಾಮುದ್ದೀನ್ ಚಿತ್ರರಂಗಕ್ಕೆ ಪ್ರವೇಶಿಸಿದ ಬಳಿಕ ತಮ್ಮ ಹೆಸರನ್ನು ಸಯ್ಯದ್ ನಿಜಾಮು ದ್ದೀನ್ ಎಂದು ಬದಲಾಯಿಸಿಕೊಂಡಿದ್ದರು.ಮುಂಬೈ ನಲ್ಲಿ ನಾಟಕ ಪ್ರದರ್ಶನ ನೀಡಿದಾಗ ಸತ್ಯಜಿತ್ ಅವರಿಗೆ ನಾನಾ ಪಾಟೇಕರ್ ಅವರ ಪರಿಚಯವಾಗಿ ಬಾಲಿವುಡ್ ನಲ್ಲೂ ಸತ್ಯಜಿತ್ ನಟಿಸಿದ್ದನ್ನು ನೆನಪು ಮಾಡಿಕೊಳ್ಳಬಹುದು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.