ಕ್ಷುಲ್ಲಕ ಕಾರಣಕ್ಕಾಗಿ ಕೊಡ್ಲಿ ತೋರಿಸಿ ಪ್ರಾಣ ಬೆದರಿಕೆ – ವಿಡಿಯೋ ವೈರಲ್

Suddi Sante Desk

ಕೋಲಾರ –

ತೋಟದ ಬಳಿಯ ನೀರಿನ ಪೈಪ್ ಕತ್ತರಿಸಿರುವ ವಿಚಾರವಾಗಿ ಕೊಡ್ಲಿ ತೋರಿಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಗದ್ದೆಕಣ್ಣೂರು ಬಳಿಯ ಕೂತಂಡಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಸೋಮಶೇಖರ್ ಎಂಬುವರು ಅದೇ ಗ್ರಾಮದ ಗೋಪಾಲಕೃಷ್ಣ ಎಂಬುವರಿಗೆ ಪ್ರಾಣ ಬೆದರಿಕೆ ಹಾಕಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಗೋಪಾಲಕೃಷ್ಣ ಎಂಬುವರ ಮೇಲೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸದ್ಯ ಆರೋಪಿ ಸೋಮಶೇಖರ್ ವಿರುದ್ಧ ಈ ಹಿಂದೆಯೂ ಸಹ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ದುರುದಾರರು ಆಗ್ರಹಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.