ಬೆಂಗಳೂರು –
ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಜಾಮೀನು ನೀಡಲು ಜನಪ್ರತಿನಿಧಿಗಳ ನ್ಯಾಯಾಲಯ ನಿರಾಕರಿಸಿದೆ. ಈಗಾಗಲೇ ವಾದ ವಿವಾದವನ್ನು ಆಲಿಸಿದ ನ್ಯಾಯಾಲಯ ಕೊನೆಗೂ ತೀರ್ಪನ್ನು ನೀಡಿದ್ದು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.ಕಳೆದ ನಾಲ್ಕು ತಿಂಗಳಿನಿಂದ ಈ ಒಂದು ಪ್ರಕರಣದಲ್ಲಿ ಬಂಧನವಾಗಿರುವ ವಿನಯ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇದ್ದಾರೆ. ಇನ್ನೂ ಜನಪ್ರತಿನಿಧಿಗಳ ನ್ಯಾಯಾಲಯ ದಲ್ಲಿ ಆದರೂ ಜಾಮೀನು ಸಿಗುತ್ತದೆ ಎಂದುಕೊಂಡಿ ದ್ದರು ಕೊನೆಗೂ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ಇದರಿಂದ ಅವರ ಕಾರ್ಯಕರ್ತರ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.