ಬೆಂಗಳೂರು –
ಕರೋನ ಮಹಾಮಾರಿಯ ಆತಂಕದ ನಡುವೆಯೂ ಈ ಬಾರಿಯೂ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ.ಹೌದು ಮೂರನೇಯ ಅಲೆಯ ಆತಂಕದ ನಡುವೆ ಸಾರ್ವಜನಿಕವಾಗಿ ಗುಂಪು ಸೇರುವುದಕ್ಕೆ ನಿರ್ಬಂಧ ಹೇರಿ ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಲಾಗಿದೆ.
ಹೌದು ಕೋವಿಡ್,ಒಮೈಕ್ರಾನ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿ ಇಂದು ಅಪರಾಹ್ನ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು ಈ ಬಾರಿಯೂ ಆಚರಣೆಗೆ ಅನುಮತಿ ನೀಡದಿರಲು ನಿರ್ಧಾರವನ್ನು ಕೈಗೊಂಡಿದ್ದಾರೆ ಡಿಸೆಂಬರ್ 30 ರಿಂದ ಜನವರಿ 2 ರವವರೆಗೆ ರಾಜ್ಯಾದ್ಯಂತ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ.ಕೋವಿಡ್ ಮತ್ತು ಒಮೈಕ್ರಾನ್ ಪರಿಸ್ಥಿತಿ ಅವಲೋಕಿಸಿ ತಜ್ಞರ ಶಿಫಾರಸಿನಂತೆ ಈ ಮಾರ್ಗಸೂಚಿ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಸಿಎಂ ಹೇಳಿದರು.
ಅಪಾರ್ಟ್ ಮೆಂಟ್ ಗಳಲ್ಲೂ ಹೊಸ ವರ್ಷಾಚರಣೆಗೆ ಪಾರ್ಟಿ ಆಯೋಜಿಸುವಂತಿಲ್ಲ ಅದೇ ರೀತಿ ಕ್ರಿಸ್ ಮಸ್ ಹಬ್ಬ ವೇಳೆ ಬಹಿರಂಗವಾಗಿ ಪಾರ್ಟಿ ಆಯೋಜಿಸುವಂತಿಲ್ಲ. ಆದರೆ ಸುರಕ್ಷಿತ ಅಂತರ ಕಾಯ್ದುಕೊಂಡು ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಉಲ್ಲೇಖ ಮಾಡಿ ಕೆಲವೊಂದಿಷ್ಟು ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.