This is the title of the web page
This is the title of the web page

Live Stream

[ytplayer id=’1198′]

April 2024
T F S S M T W
 123
45678910
11121314151617
18192021222324
252627282930  

| Latest Version 8.0.1 |

ಬೆಂಗಳೂರು ನಗರ

ಎಲ್ಲಿಗೆ ಬಂತು 7ನೇ ವೇತನ ಆಯೋಗದ ವರದಿ – ಆರು ತಿಂಗಳಲ್ಲಿ ಸಲ್ಲಿಕೆಯಾಗಬೇಕಾಗಿದ್ದ ವರದಿ ವಿಳಂಬ ಯಾಕೆ…..

WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಸಮಸ್ತ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮಾಡುವ ಕುರಿತು ಈ ಹಿಂದೆ 7ಬೇ ವೇತನ ಆಯೋಗವನ್ನು ರಚನೆ ಮಾಡಲಾಗಿದೆ ಈಗಾಗಲೇ ಈ ಒಂದು ಸಮಿತಿ ರಚಿಸಿ ವರದಿ ಸಲ್ಲಿಸಲು 6 ತಿಂಗಳುಗಳ ಕಾಲ ಸಮಯವನ್ನು ಕೂಡಾ ನೀಡಲಾಗಿದೆ. ಆದರ ಕೂಡಾ ಈವರೆಗೆ ಈ ಒಂದು ಸಮಿತಿ ವರದಿ ನೀಡಿಲ್ಲ.

7ನೇ ರಾಜ್ಯ ವೇತನ ಆಯೋಗ ಕರ್ನಾಟಕದ ಸರ್ಕಾರಿ ನೌಕರರ ಬೇಡಿಕೆಯಂತರ ಕರ್ನಾಟಕ ಸರ್ಕಾರ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿ ಆದೇಶ ಹೊರಡಿಸಿತ್ತು.ಆಯೋಗಕ್ಕೆ ಸುಧಾಕರ್ ರಾವ್ ಅಧ್ಯಕ್ಷರಾಗಿದ್ದಾರೆ. ಪಿ. ಬಿ. ರಾಮಮೂರ್ತಿ,ಶ್ರೀಕಾಂತ್ ಬಿ. ವನಹಳ್ಳಿ ಸದಸ್ಯರು. ಮೂಲಸೌಲಭ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಕಾರ್ಯದರ್ಶಿಯಾಗಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ 7ನೇ ವೇತನ ಆಯೋಗ ರಚಿಸಲಾಗಿದೆ.ವೇತನ ಆಯೋಗ 6 ತಿಂಗಳಿನಲ್ಲಿ ವರದಿ ನೀಡಬೇಕು ಎಂದು ತಿಳಿಸಲಾ ಗಿತ್ತು. ಆದರೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಬಂದಿದ್ದರಿಂದ ಆಯೋಗ ವರದಿ ತಯಾರು ಮಾಡುವುದು ತಡವಾಗಿದೆ.

ಆದ್ದರಿಂದ ಈಗ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ.ಆಯೋಗದ ವರದಿ ಬಂದ ಬಳಿಕ ಸರ್ಕಾರ ತೆಗೆದುಕೊಳ್ಳುವ ತೀರ್ಮಾನದಿಂದ ರಾಜ್ಯದ 6 ಲಕ್ಷ ಸರ್ಕಾರಿ ಅಧಿಕಾರಿ, ನೌಕರರರು. 3.40 ಲಕ್ಷ ನಿಗಮ ಮಂಡಳಿ, ಪ್ರಾಧಿಕಾರ ಮತ್ತು ವಿಶ್ವವಿದ್ಯಾಲಯ, ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ಸಿಬ್ಬಂದಿಗಳು ಹಾಗೂ 4 ಲಕ್ಷ ನಿವೃತ್ತ ನೌಕರರಿಗೆ ಲಾಭವಾಗಲಿದೆ.

ಚುನಾವಣೆಗೂ ಮುನ್ನ ಮಧ್ಯಂತರ ವರದಿಯನ್ನು ಆಯೋಗ ನೀಡಲಿದೆ ಎಂದು ನೌಕರರು ನಿರೀಕ್ಷೆ ಮಾಡಲಾಗಿತ್ತು.ಆದರೆ ವರದಿ ಸಲ್ಲಿಕೆಯಾಗಲಿಲ್ಲ ಸಧ್ಯ ಮತ್ತೆ ವರದಿ ಸಲ್ಲಿಸಲು ಆರು ತಿಂಗಳು ಸಮಯ ವಿಸ್ತರಣೆ ಮಾಡಲಾಗಿದ್ದು ಹೀಗಾಗಿ ವಿಳಂಬ ವಾಗಲಿದೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk