ಬೆಂಗಳೂರು –
ಶಿಕ್ಷಕರ ವರ್ಗಾವಣೆ ರಾಜ್ಯದಲ್ಲಿ ಬಗೆ ಹರಿಯಲಾರದ ದೊಡ್ಡ ಪ್ರಮಾಣದ ಸಮಸ್ಯೆಯಾಗಿದೆ ಮನಸ್ಸು ಮಾಡಿದರೆ ಅದೇನು ದೊಡ್ಡ ಸಮಸ್ಯೆ ಯೇನಲ್ಲ ಆದರೆ ಇದನ್ನು ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸಮಸ್ಯೆಯನ್ನಾಗಿ ಮಾಡಿದ್ದಾರೆ.ಹೌದು ಆದರೆ ಅತ್ತ ಪಶ್ಚಿಮ ಬಂಗಾಳದಲ್ಲಿ ಈ ಒಂದು ವರ್ಗಾವಣೆ ಸರಳವಾಗಿದೆ ಅದು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಶಿಕ್ಷಕರ ಕುರಿತು ಭರವಸೆಯೊಂ ದನ್ನು ನೀಡಲಾಗಿತ್ತು.ಶಾಲಾ ಶಿಕ್ಷಕರನ್ನು ಜೀವಮಾನ ದಲ್ಲಿ ಒಂದು ಬಾರಿ ಅವರ ತವರು ಜಿಲ್ಲೆಗೆ ವರ್ಗಾ ವಣೆ ಮಾಡಲಾಗುತ್ತದೆ ಎಂದರು
ಹೀಗೆ ಕೆಲವು ವರ್ಷಗಳ ಕಾಲವಾದರೂ ಶಿಕ್ಷಕರು ಸ್ಥಳೀಯವಾಗಿಯೇ ಕೆಲಸ ಮಾಡುವುದರಿಂದ ವೈಯಕ್ತಿಕವಾಗಿ ಅವರ ಕುಟುಂಬದ ಬಗ್ಗೆಯೂ ಗಮನವಹಿಸಲು ಸಾಧ್ಯವಾಗುತ್ತದೆ ಎಂಬುದು ಇದರ ಉದ್ದೇಶವಾಗಿತ್ತು.ಇದೇ ಮಾದರಿಯನ್ನು ರಾಜ್ಯದಲ್ಲಿಯೂ ಸಹ ಜಾರಿ ಮಾಡಲು ಮುಂದಾ ಗಿದ್ದು ಯಾವಾಗ ಎಂಬ ಪ್ರಶ್ನೆ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರು ಪ್ರಶ್ನೆ ಮಾಡುತ್ತಿದ್ದಾರೆ
ಶಿಕ್ಷಕರನ್ನು ಯಾವ ಮಾನದಂಡದ ಮೇಲೆ ವರ್ಗಾ ವಣೆಗೆ ಆಯ್ಕೆ ಮಾಡಬೇಕು ಎಂಬ ಜಿಜ್ಞಾಸೆ ಉಂಟಾಗಿದೆ.ಹೊರಗಿನ ಜಿಲ್ಲೆಗಳಲ್ಲಿ ಎಷ್ಟು ವರ್ಷ ಸೇವೆ ಸಲ್ಲಿಸಿದ್ದಾರೆ.ಇತರೆ ಯಾವ ಕಾರಣಗಳನ್ನು ಪರಿಶೀಲಿಸಬೇಕು ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ.ತವರು ಜಿಲ್ಲೆಯಿಂದ ಹೊರಗೆ 15 ವರ್ಷಗಳ ಕಾಲ ಸೇವೆ ಸಲ್ಲಿಸಿದವರನ್ನು ಮಾತ್ರ ಈ ನಿಯಮದಡಿ ತರಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.
ಆದರೆ, ಶಿಕ್ಷಕರ ಸಂಘಟನೆಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು ನಿಯಮಾವಳಿಗಳ ಪ್ರಕಾರ 10 ವರ್ಷದ ಸೇವೆಯನ್ನು ಮಾತ್ರ ಪರಿಗಣಿಸಬೇಕು. ಯಾರು ಹೊರ ಜಿಲ್ಲೆಗಳಲ್ಲಿ 10 ವರ್ಷ ಸೇವೆ ಪೂರ್ಣಗೊಳಿಸಿರುತ್ತಾರೋ ಅಂತಹವರನ್ನು ಒಂದು ಬಾರಿ ಅವರ ತವರು ಜಿಲ್ಲೆಗೆ ನೇಮಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಇನ್ನೂ ಪ್ರಮುಖವಾಗಿ ಅನ್ಯ ಜಿಲ್ಲೆಯ ಶಿಕ್ಷಕರನ್ನು ವರ್ಗಾವಣೆ ಮಾಡಿದರೆ ಯಾವುದೇ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಕಾಡಬಹುದು ಎಂಬ ಅಭಿಪ್ರಾಯ ವನ್ನೂ ಒಪ್ಪುತ್ತೇವೆ ಮೊದಲು ವರ್ಗಾವಣೆಗೆ ಅರ್ಹವಾದವರ ಪಟ್ಟಿ ತಯಾರಿಸಿ ಅವರಿಗೆ ವರ್ಗಾವಣೆ ನೀಡಿ.ಹೊಸದಾಗಿ ಶಿಕ್ಷಕರ ನೇಮಕ ಮಾಡಿಕೊಂಡು ಆ ಸ್ಥಾನ ತುಂಬಿದ ಬಳಿಕ ಅವರ ನ್ನು ಆ ಜಿಲ್ಲೆಯಿಂದ ಬಿಡುಗಡೆಗೊಳಿಸಿ ಎಂಬ ಮಾತುಗಳು ಶಿಕ್ಷಕರಿಂದ ಕೇಳಿ ಬರುತ್ತಿವೆ.