This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

State News

ಬಿಜೆಪಿ ಶಾಸಕರಿಂದ ದೌರ್ಜನ್ಯ ವಂತೆ CM ಮಗನ ಮುಂದೆ ನೋವು ತೊಡಿಕೊಂಡ ಮಹಿಳೆಯರು……

WhatsApp Group Join Now
Telegram Group Join Now

ಚಿಕ್ಕಮಗಳೂರು –

ತರೀಕೆರೆ ಬಿಜೆಪಿ ಶಾಸಕ ಸುರೇಶ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ಪುತ್ರ ವಿಜಯೇಂದ್ರ ಅವರ ಮುಂದೆ ಮಹಿಳೆಯರು ಕಣ್ಣೀರು ಹಾಕಿದ ಘಟನೆ ಚಿಕ್ಕಮಗಳೂರು ನಗರದ ಕಲ್ಯಾಣ ನಗರದಲ್ಲಿ ನಡೆಯಿತು.

ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದರು. ಈ ಸಂದರ್ಭ ವಿಜಯೇಂದ್ರ ಅವರ ಮುಂದೆ ಕಣ್ಣೀರು ಹಾಕಿದ ಮಹಿಳೆಯರು, ನ್ಯಾಯ ಕೊಡಿ ಇಲ್ಲವೇ ದಯಾಮರಣ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

7 ವರ್ಷದ ಹಿಂದೆ ಚಿಕ್ಕಮಗಳೂರು ಮೂಲದ ಪ್ರಸನ್ನ ಅವರ ಕುಟುಂಬ ತರೀಕೆರೆ ತಾಲೂಕಿನ ಲಕ್ಕವಳ್ಳಿಯಲ್ಲಿ 50 ಎಕರೆ ಜಮೀನು ಖರೀದಿ ಮಾಡಿದ್ದರು.

ಈ ಸಂಬಂಧ ತರೀಕೆರೆ ಶಾಸಕ ಸುರೇಶ್ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದು, ಪ್ರಕರಣ ನ್ಯಾಯಾಲಯದಲ್ಲಿ ದ್ದರೂ ಶಾಸಕರು ಹಿಂಬಾಲಕರ ಮೂಲಕ ಹಲ್ಲೆ ನಡೆಸುತ್ತಿದ್ದಾರೆ.

ಪೊಲೀಸ್ ಠಾಣೆಗೆ ದೂರು ನೀಡಿದರೆ ನ್ಯಾಯ ಸಿಗುತ್ತಿಲ್ಲ. ನಮಗೆ ನ್ಯಾಯ ಕೊಡಿ. ಇಲ್ಲವೇ ದಯಾಮರಣ ಕೊಡಿ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು ಒಟ್ಟಾರೆ ಬಿಜೆಪಿ ಶಾಸಕರೊಬ್ಬರ ದೌರ್ಜನ್ಯ ಕುರಿತು ನೋವನ್ನು ಹೇಳಿಕೊಂಡಿದ್ದು ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು.


Google News

 

 

WhatsApp Group Join Now
Telegram Group Join Now
Suddi Sante Desk