ಥೂ.. ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು.ಬೈಕ್ ಸವಾರನನ್ನು ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯ….

Suddi Sante Desk

ಮೈಸೂರು –

ಥೂ.. ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು.ಮೈಸೂರು ರಿಂಗ್‌ ರಸ್ತೆಯಲ್ಲಿ ಅಪಘಾತ ಪ್ರಕರಣ ಕುರಿತು ಮೈಸೂರು ಪೊಲೀಸ್ ಆಯುಕ್ತರ ವಿರುದ್ದ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿ ನಲ್ಲಿ ಮಾತನಾಡಿದ ಅವರು ಬೈಕ್ ಸವಾರ ನನ್ನು ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯ.ನೀನು ಯಾವ್ ಸೀಮೆ ಕಮಿಷನ ರಯ್ಯ..? ಎನ್ನುತ್ತಾ ಕಿಡಿಕಾರಿದರು.

ಮೈಸೂರಿನಲ್ಲಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.ಪೊಲೀಸ್ ಕಮಿಷನರ್ ಬೀದಿಗೆ ಬರಲ್ಲ.ಸಿಟಿ ರೌಂಡ್ ಹಾಕಲ್ಲ ಎಷ್ಟೊರ್ಷ ಆಯ್ತು ಬಂದು.ಎಷ್ಟು ಜನ ಡಿಸಿಪಿ,‌ಎಸಿಪಿಗಳಿದ್ದೀರಿ ಏನ್ ಮಾಡ್ತಿದ್ದೀರಿ.ಕೇವಲ ಟ್ರಾಫಿಕ್ ಪೊಲೀಸರಿಂದ ಟ್ರಾಫಿಕ್ ಕಂಟ್ರೋಲ್ ಆಗಲ್ಲ.ಜನಪ್ರತಿನಿಧಿಗಳು, ಜನರ‌ ಬಗ್ಗೆ ಗೌರವ ಇಲ್ಲ.ಸದನದಲ್ಲಿ ಚರ್ಚೆಯೂ ಆಗಿಲ್ಲ, ನಿನ್ನೆಯಲ್ಲ ಸಿಡಿ ಇಡ್ಕೊಂಡು ವಿಷ್ಣು ಚಕ್ರ ತಿರುಗಿಸಿದ್ದಾರೆ.ಮೈಸೂರಿನಲ್ಲಿ ನಡೆದ ನಿನ್ನೆಯ ಘಟನೆ ಖಂಡನೀಯ ಎಂದರು.

ಇದು ಪೊಲೀಸರ ಅತಾಚೂರ್ಯದಿಂದ ನಡೆದ ಘಟನೆ.ಓಡಾಡಿಸಿಕೊಂಡು ಬೈಕ್ ಹಿಡಿಯಿರಿ ಅಂತ ಕಾನೂನು ಎಲ್ಲಿದೆ.ಫೋಟೋ, ಸಿಸಿ ಕ್ಯಾಮೆರಾ ಇಲ್ವ.
ಇವರಿಗೆ ಮಾನ ಮಾರ್ಯದೆ ಇಲ್ಲ, ಗೂಂಡಾಗಿರಿ ಮಾಡ್ತಿದ್ದಾರೆ.ಕಮಿಷನರ್ ಸುಮ್ಮನೆ ಕೂರುವುದಲ್ಲ, ಹೊರಗೆ ಬರಬೇಕು.ಬೈಕ್ ಸವಾರನ ಸಾಯಿಸಿದ್ದಕ್ಕೆ ಪ್ರಶಂಸನಾ ಪತ್ರ ನೀಡ್ತಿಯಾ ನೀನು ಯಾವ ಸೀಮೆ ಕಮಿಷನರಯ್ಯ‌ ನೀನು.ಸಿಟಿ ಪೊಲೀಸ್ ಕಾಯ್ದೆ ಏನ್ ಹೇಳುತ್ತೆ.ಓಡಿಸಿಕೊಂಡು ಬೈಕ್ ಇಡಿ ಅಂತ ಹೇಳುತ್ತಾ.ಸರ್ಕಾರದ ದುಡ್ಡಲ್ಲಿ ಕ್ಯಾಮೆರಾ, ಉಪಕರ ಣಗಳನ್ನ ಕೊಟ್ಟಿದ್ದೀವಿ.ಈ ವರ್ತನೆಯನ್ನ ಯಾರೂ ಕ್ಷಮಿಸಲ್ಲ‌.ಪೊಲೀಸರು ಸುದ್ದಿ ಕೊಟ್ಟರೆ ಅಲ್ವೆ ಗೃಹ ಸಚಿವರು ಮಾತನಾಡೋದು.ಮೈಸೂರಿನಲ್ಲಿ ಪೊಲೀಸರು ದಾರಿ ತಪ್ಪುತ್ತಿದ್ದಾರೆ ಎಂದರು.

ಓಡಾಡಿಸಿಕೊಂಡು ವಾಹನ ಹಿಡಿಯೋದನ್ನು ಬಿಡಬೇಕು.ತಪ್ಪಿಸಿಕೊಂಡು ಓಡಿ ಹೋದರೆ ಕ್ಯಾಮೆರಾ ಸಿಸಿ ಕ್ಯಾಮೆರಾ ಇಲ್ವ.ತಪಾಸಣೆ ಮಾಡಿ ಆದರೆ ಕ್ಯಾಮೆರಾ ಇರೋದು ಯಾಕೆ.ಈ ಸಂಬಂಧ ನಾನು ಗೃಹ ಸಚಿವರು, ಜಿಲ್ಲಾ ಮಂತ್ರಿ ಜೊತೆ ಮಾತನಾಡ್ತೀನಿ.ಮೈಸೂರು ಪೊಲೀಸರ ವಿರುದ್ದ ಹೆಚ್.ವಿಶ್ವನಾಥ್ ಕಿಡಿ‌ಕಾರಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.