This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

State News

ಥೂ.. ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು.ಬೈಕ್ ಸವಾರನನ್ನು ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯ….

WhatsApp Group Join Now
Telegram Group Join Now

ಮೈಸೂರು –

ಥೂ.. ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು.ಮೈಸೂರು ರಿಂಗ್‌ ರಸ್ತೆಯಲ್ಲಿ ಅಪಘಾತ ಪ್ರಕರಣ ಕುರಿತು ಮೈಸೂರು ಪೊಲೀಸ್ ಆಯುಕ್ತರ ವಿರುದ್ದ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿ ನಲ್ಲಿ ಮಾತನಾಡಿದ ಅವರು ಬೈಕ್ ಸವಾರ ನನ್ನು ಸಾಯಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯ.ನೀನು ಯಾವ್ ಸೀಮೆ ಕಮಿಷನ ರಯ್ಯ..? ಎನ್ನುತ್ತಾ ಕಿಡಿಕಾರಿದರು.

ಮೈಸೂರಿನಲ್ಲಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.ಪೊಲೀಸ್ ಕಮಿಷನರ್ ಬೀದಿಗೆ ಬರಲ್ಲ.ಸಿಟಿ ರೌಂಡ್ ಹಾಕಲ್ಲ ಎಷ್ಟೊರ್ಷ ಆಯ್ತು ಬಂದು.ಎಷ್ಟು ಜನ ಡಿಸಿಪಿ,‌ಎಸಿಪಿಗಳಿದ್ದೀರಿ ಏನ್ ಮಾಡ್ತಿದ್ದೀರಿ.ಕೇವಲ ಟ್ರಾಫಿಕ್ ಪೊಲೀಸರಿಂದ ಟ್ರಾಫಿಕ್ ಕಂಟ್ರೋಲ್ ಆಗಲ್ಲ.ಜನಪ್ರತಿನಿಧಿಗಳು, ಜನರ‌ ಬಗ್ಗೆ ಗೌರವ ಇಲ್ಲ.ಸದನದಲ್ಲಿ ಚರ್ಚೆಯೂ ಆಗಿಲ್ಲ, ನಿನ್ನೆಯಲ್ಲ ಸಿಡಿ ಇಡ್ಕೊಂಡು ವಿಷ್ಣು ಚಕ್ರ ತಿರುಗಿಸಿದ್ದಾರೆ.ಮೈಸೂರಿನಲ್ಲಿ ನಡೆದ ನಿನ್ನೆಯ ಘಟನೆ ಖಂಡನೀಯ ಎಂದರು.

ಇದು ಪೊಲೀಸರ ಅತಾಚೂರ್ಯದಿಂದ ನಡೆದ ಘಟನೆ.ಓಡಾಡಿಸಿಕೊಂಡು ಬೈಕ್ ಹಿಡಿಯಿರಿ ಅಂತ ಕಾನೂನು ಎಲ್ಲಿದೆ.ಫೋಟೋ, ಸಿಸಿ ಕ್ಯಾಮೆರಾ ಇಲ್ವ.
ಇವರಿಗೆ ಮಾನ ಮಾರ್ಯದೆ ಇಲ್ಲ, ಗೂಂಡಾಗಿರಿ ಮಾಡ್ತಿದ್ದಾರೆ.ಕಮಿಷನರ್ ಸುಮ್ಮನೆ ಕೂರುವುದಲ್ಲ, ಹೊರಗೆ ಬರಬೇಕು.ಬೈಕ್ ಸವಾರನ ಸಾಯಿಸಿದ್ದಕ್ಕೆ ಪ್ರಶಂಸನಾ ಪತ್ರ ನೀಡ್ತಿಯಾ ನೀನು ಯಾವ ಸೀಮೆ ಕಮಿಷನರಯ್ಯ‌ ನೀನು.ಸಿಟಿ ಪೊಲೀಸ್ ಕಾಯ್ದೆ ಏನ್ ಹೇಳುತ್ತೆ.ಓಡಿಸಿಕೊಂಡು ಬೈಕ್ ಇಡಿ ಅಂತ ಹೇಳುತ್ತಾ.ಸರ್ಕಾರದ ದುಡ್ಡಲ್ಲಿ ಕ್ಯಾಮೆರಾ, ಉಪಕರ ಣಗಳನ್ನ ಕೊಟ್ಟಿದ್ದೀವಿ.ಈ ವರ್ತನೆಯನ್ನ ಯಾರೂ ಕ್ಷಮಿಸಲ್ಲ‌.ಪೊಲೀಸರು ಸುದ್ದಿ ಕೊಟ್ಟರೆ ಅಲ್ವೆ ಗೃಹ ಸಚಿವರು ಮಾತನಾಡೋದು.ಮೈಸೂರಿನಲ್ಲಿ ಪೊಲೀಸರು ದಾರಿ ತಪ್ಪುತ್ತಿದ್ದಾರೆ ಎಂದರು.

ಓಡಾಡಿಸಿಕೊಂಡು ವಾಹನ ಹಿಡಿಯೋದನ್ನು ಬಿಡಬೇಕು.ತಪ್ಪಿಸಿಕೊಂಡು ಓಡಿ ಹೋದರೆ ಕ್ಯಾಮೆರಾ ಸಿಸಿ ಕ್ಯಾಮೆರಾ ಇಲ್ವ.ತಪಾಸಣೆ ಮಾಡಿ ಆದರೆ ಕ್ಯಾಮೆರಾ ಇರೋದು ಯಾಕೆ.ಈ ಸಂಬಂಧ ನಾನು ಗೃಹ ಸಚಿವರು, ಜಿಲ್ಲಾ ಮಂತ್ರಿ ಜೊತೆ ಮಾತನಾಡ್ತೀನಿ.ಮೈಸೂರು ಪೊಲೀಸರ ವಿರುದ್ದ ಹೆಚ್.ವಿಶ್ವನಾಥ್ ಕಿಡಿ‌ಕಾರಿದರು.


Google News

 

 

WhatsApp Group Join Now
Telegram Group Join Now
Suddi Sante Desk