ಮಂಡ್ಯ –
ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು – ಥಳಿಸಿದ ಕಾರಣ ಕೇಳಿದರೆ ಶಾಕ್ ಆಗುತ್ತೆ ಹೌದು ಇಂತಹ ದೊಂದು ಘಟನೆ ಮಂಡ್ಯ ದಲ್ಲಿ ನಡೆದಿದೆ.ಹಾಸ್ಟೆಲ್ ವಿದ್ಯಾರ್ಥಿನಿ ಯರ ಜೊತೆ ಅಸಭ್ಯ ವರ್ತನೆ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿತವನ್ನು ಮಾಡಲಾಗಿದೆ.
ಹಾಸ್ಟೆಲ್ ವಿದ್ಯಾರ್ಥಿನಿಯರಿಂದಲೇ ಮುಖ್ಯ ಶಿಕ್ಷಕನಿಗೆ ಥಳಿತ ಮಾಡಲಾಗಿದೆ.ಕೈಯಲ್ಲಿ ದೊಣ್ಣೆ ಹಿಡಿದು ಚಳಿ ಬಿಡಿಸಿದ್ದಾರೆ ವಿದ್ಯಾರ್ಥಿನಿಯರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮ ದಲ್ಲಿ ಈ ಒಂದು ಘಟನೆ ನಡೆದಿದೆ.ಚಿನ್ಮಯ ಆನಂದ ಮೂರ್ತಿ ಥಳಿತಕ್ಕೊಳಾದ ಮುಖ್ಯ ಶಿಕ್ಷಕ ರಾಗಿದ್ದಾರೆ.
ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆಯನ್ನು ಮಾಡಿದ್ದಾರೆ.ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯಿಂದ ಸಹಪಾಠಿಗೆ ಮಾಹಿತಿಯನ್ನು ನೀಡಿದ್ದಾರೆ.ಕೈಯಲ್ಲಿ ಕೋಲು ದೊಣ್ಣೆ ಹಿಡಿದು ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿ ಅಸಭ್ಯವಾಗಿ ವರ್ತಿಸಿದ ಶಿಕ್ಷಕನಿಗೆ ತಕ್ಕ ಪಾಠ ಕಲೆಸಿದ್ದಾರೆ ವಿದ್ಯಾರ್ಥಿನಿಯರು.
ಸ್ಥಳಕ್ಕೆ ಕೆ.ಆರ್.ಎಸ್ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಖ್ಯ ಶಿಕ್ಷಕ ನನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಮಂಡ್ಯ…..