This is the title of the web page
This is the title of the web page

Live Stream

May 2023
T F S S M T W
 123
45678910
11121314151617
18192021222324
25262728293031

| Latest Version 8.0.1 |

ಧಾರವಾಡ

ಪ್ರಧಾನಿ ಕಾರ್ಯಕ್ರಮಕ್ಕೆ ಜನ ಸೇರುತ್ತಿಲ್ಲ ಎಂದು ವಿದ್ಯಾರ್ಥಿಗಳ ಬಳಕೆ ಕೈ ಯುವ ಮುಖಂಡ ಆರೋಪ ಖಂಡನೆ – ಕಾಲೇಜ್ ವಿದ್ಯಾರ್ಥಿಗಳ ಮೇಲೆ ಸರ್ವಾಧಿಕಾರತ್ವಕ್ಕೆ ಆಕ್ರೋಶ…..


ಹುಬ್ಬಳ್ಳಿ

ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುವ ಕಾರಣಕ್ಕೆ ತಮ್ಮ ನಾಯಕನ ಸಂತೈಸುವ ಸಲುವಾಗಿ ಸಭಾಪತಿ ಬಸವರಾಜ್ ಹೊರಟ್ಟಿ ಮೂಲಕ ಫರ್ಮಾನು ಪಡೆದಿರುವ ಜಿಲ್ಲಾಡಳಿತ  ಜಿಲ್ಲೆಯ ಎಲ್ಲಾ ಕಾಲೇಜುಗಳ ಪ್ರಾಚಾರ್ಯರು ಕಾಲೇಜು ಮಂಡಳಿಗಳಿಗೆ ಒತ್ತಡ ಹೇರಿ ಒತ್ತಾಯ ಪೂರ್ವಕವಾಗಿ ಜಿಲ್ಲೆಯ ವಿದ್ಯಾರ್ಥಿಗಳನ್ನ ಕಾರ್ಯಕ್ರಮಕ್ಕೆ ಕರೆ ತರುವ ಪ್ರಯತ್ನ ನಡೆಸ ಲಾಗುತ್ತಿದೆ.

ಸರ್ಕಾರಿ ಕಾರ್ಯಕ್ರಮದ ಹೆಸರಿನಲ್ಲಿ ಬಿಜೆಪಿ ಪಕ್ಷವು ರಾಜಕೀಯ ಕಾರ್ಯಕ್ರಮ ಮಾಡುತ್ತಿರು ವುದನ್ನ ನಾವು ಖಂಡಿಸುತ್ತೇವೆ ಅಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಕರೆಸುವುದನ್ನ ಕೂಡ ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಆರೋಪ ಮಾಡಿದ್ದಾರೆ.

ಬಿಜೆಪಿ ನಾಯಕರಿಗೆ ತಮ್ಮ ಕಾರ್ಯಕ್ರಮಕ್ಕೆ ಜನ ಸೇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಜುಗರ ಉಂಟಾಗಬಾರದು ಎಂದು ಈ ರೀತಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊ ಳ್ಳುತ್ತಿಯುವುದನ್ನ ತಕ್ಷಣ ನಿಲ್ಲಿಸಬೇಕು ಎಂದಿ ದ್ದಾರೆ.ಸ್ವಯಂ ಪ್ರೇರಿತವಾಗಿ ಬರುವ ಯುವಕ ಯುವತಿಯರನ್ನ ಮಾತ್ರ ಸ್ವಾಗತಿಸಬೇಕು ಎಂದು ಆಗ್ರಹ ಮಾಡುತ್ತೇವೆ ಎಂದು ರಜತ್ ಉಳ್ಳಾಗಡ್ಡಿ ಮಠ ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ……


Google News Join The Telegram Join The WhatsApp

 

 

Suddi Sante Desk

Leave a Reply